ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ರಾಜ್ಯ ಸರಕಾರ ಆದೇಶ

ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ರಾಜ್ಯ ಸರಕಾರ ಆದೇಶ

ಉಡುಪಿ, ಮೇ 28: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಎಲ್ಲಾ ರೀತಿಯ ಯಾಂತ್ರೀಕೃತ ಬೋಟುಗಳ ಮತ್ತು 10 ಅಶ್ವಶಕ್ತಿ (ಎಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಗಳಿಗೆ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧ ವಿಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ ಅಳವಡಿಸಿರುವ 10 ಅಶ್ವಶಕ್ತಿ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳಿಗೆ ರಾಜ್ಯ ಕರಾವಳಿಯಲ್ಲಿ ಈ ಸಮಯದಲ್ಲಿ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ ನಲ್ಲಿ ರಾಜ್ಯ ಮಾರಾಟ ಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ರಾಜ್ಯ