ಜೂ.1ರಿಂದ ಮೀನುಗಾರಿಕೆ ನಿಷೇಧ

ಜೂ.1ರಿಂದ ಮೀನುಗಾರಿಕೆ ನಿಷೇಧ

ಮಂಗಳೂರು: ಸರಕಾರದ ಸೂಚನೆಯಂತೆ ಎಂದಿನಂತೆ ಈ ಬಾರಿಯೂ ಜೂ.1ರಿಂದ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕಾ ಇಲಾಖೆಯು ಆದೇಶ ಹೊರಡಿಸಿದೆ.

ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30ರವರೆಗೆ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಮೀನುಗಾರಿಕೆ ನಡೆಸದಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯ