ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ 

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್‌ಎಫ್‌ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.

ರಾಜ್ಯ