ಪ್ರಾವಾಹಕ್ಕೆ ಕೊಚ್ಚಿ ಬಂದ ಆನೆಯ ಮೃತದೇಹ…!ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ

ಪ್ರಾವಾಹಕ್ಕೆ ಕೊಚ್ಚಿ ಬಂದ ಆನೆಯ ಮೃತದೇಹ…!ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ

ಸುಬ್ರಹ್ಮಣ್ಯ: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ  ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ.

ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ  ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು,  ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ  ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ

ರಾಜ್ಯ