
ಮಂಗಳೂರು: ನಗರದ ಧಕ್ಕೆಯಲ್ಲಿ ಶುಕ್ರವಾರ(ಆ.16) ಬೆಳಗ್ಗೆ ಸ್ಕೂಟರ್ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ (47) ಮೃತಪಟ್ಟಿದ್ದಾರೆ. ಅವರು ಕಸ್ಬಾದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ ಶಾಲೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ ಠಾಣೆಯ ಎಎಸ್ಐ ಮಹಮ್ಮದ್ ಅವರ ಪತ್ನಿ. ಮೃತರು ಪತಿ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ.

ಕಳೆದ 8 ವರ್ಷದಿಂದ ಕಸಬಾ ಬೆಂಗರೆಯ ಎಆರ್ಕೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶಾಹಿದಾ ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್ನಲ್ಲಿ ಈ ಅಪಘಾತ ಸಂಭವಿಸಿತು.
