
ಸುಳ್ಯ : ಸಂಚರಿಸುತ್ತಿದ್ದ ಬೈಕ್ ಮೇಲೆ ಕಡವೆಯೋಮದು ಜಿಗಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ನಡೆದಿದೆ.

ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ ಗೊಂಡ ಸವಾರರಾಗಿದ್ದಾರೆ. ತನ್ನ ಮನೆಯಿಂದ ಪಂಜ ಕಡೆ ಹೋಗುತ್ತಿದ್ದಾಗ ಜಳಕದಹೊಳೆ ಎಂಬಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.ಬೈಕ್ ಸವಾರನ ಕೈ,ಕಾಲು, ಭುಜದ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಡಬದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಂಜ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ