ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿಯ ನಿಂದನೆ ವಿರುದ್ದ ಸುಳ್ಯ ತಾಲೂಕು ಜನತಾದಳದ ವತಿಯಿಂದ  ತಾಹಶೀಲ್ದಾರ್ ಗೆ ಮನವಿ: ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.

ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿಯ ನಿಂದನೆ ವಿರುದ್ದ ಸುಳ್ಯ ತಾಲೂಕು ಜನತಾದಳದ ವತಿಯಿಂದ  ತಾಹಶೀಲ್ದಾರ್ ಗೆ ಮನವಿ: ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.

ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗೌರವಾನ್ವಿತ ಬೃಹತ್ ಕೈಗಾರಿಕೆ ಉಕ್ಕು ಹಾಗೂ ಗಣಿ ಸಚಿವರಾದ  ಹೆಚ್. ಡಿ .  ಕುಮಾರಸ್ವಾಮಿಯವರನ್ನು ಅಸಹನೀಯ ಪದ ಬಳಕೆ ಬಳಸಿ  ಅಗೌರವಿಸಿರುವುದನ್ನು ಸುಳ್ಯ ತಾಲೂಕು ಜನತದಳವು ಖಂಡಿಸುತ್ತದೆ. ಹಾಗೆಯೇ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ದುರುದ್ದೇಶದಿಂದ ಕೇಂದ್ರ ಸಚಿವರನ್ನು ಅವಮಾನಗೊಳಿಸಿರುವ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖರ್ ಇವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಸುಳ್ಯ ತಾಲೂಕು ಜನತಾದಳವು ಸುಳ್ಯ ತಾಲೂಕು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿತು. ಇದರಲ್ಲಿ ಸುಳ್ಯ ತಾಲೂಕು ಜನತಾದಳದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ , ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ,  ಉಪಾಧ್ಯಕ್ಷರುಗಳಾದ ದೇವರಾಮ ಬಾಳಕಜೆ,  ರೋಹನ್ ಪೀಟರ್,  ಪ.ಜಾತಿ ಪ.ಪಂಗಡ ಅಧ್ಯಕ್ಷ ಎಂ.ಬಿ. ಚೋಮ, ರಾಮಚಂದ್ರ ಬಳ್ಳಡ್ಕ ಮೊದಲಾದವರು ಇದ್ದರು.

ರಾಜ್ಯ