ಆರ್ತಾಜೆ ಬಳಿ ದ್ವಿಚಕ್ರ ವಾಹನಗಳ ಡಿಕ್ಕಿ –ಐವರ್ನಾಡಿನ ವ್ಯಕ್ತಿ ಮೃತ್ಯು

ಆರ್ತಾಜೆ ಬಳಿ ದ್ವಿಚಕ್ರ ವಾಹನಗಳ ಡಿಕ್ಕಿ –ಐವರ್ನಾಡಿನ ವ್ಯಕ್ತಿ ಮೃತ್ಯು

ಸುಳ್ಯದ ಪೈಚಾರು ಸಮೀಪ ಆರ್ತಾಜೆ ಬಳಿ ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತಪಟ್ಟ ವ್ಯಕ್ತಿಯನ್ನು ಐವರ್ನಾಡು ಬೋಜಪ್ಪ ಗೌಡ ಎಂದು ಗುರುತಿಸಲಾಗಿದೆ.

ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಮತಪಟ್ಟಿರುವುದಾಗಿ ತಿಳಿದು ಬಂದಿದೆ.

ಮತ್ತೊಂದು ಬೈಕಿನಲ್ಲಿ ಇದ್ದ ಇಬ್ಬರು ಸವಾರರೂ ಗಾಯಗೊಂಡಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

ರಾಜ್ಯ