ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ 

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ 

ಮಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತಿದ್ದ ವಾಹನಕ್ಕೆ ಕಿಡಿಗೇಡಿಗಳು ತಡೆಯೊಡ್ಡಿ ಕೃತ್ಯ ಎಸಗಿದ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ.

ಪೂಜ್ಯ ಸಾಧು ಸಂತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

ಈ ಕುರಿತು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ  ಶರಣ್ ಪಂಪವೆಲ್ ಕೇರಳ ಸರಕಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯ