
ಬೆಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಬೆಳ್ತಂಗಡಿ ಮೂಲದ ವಿದ್ಯಾರ್ಥಿಯೊಬ್ಬ ಮೃ*ತ ಪಟ್ಟಿದ್ದು ಮತ್ತೋರ್ವ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬೆಳ್ತಂಗಡಿ ತಾಲೂಕಿನ ಇಂದಬೆಟ್ಟ ಗ್ರಾಮದ ನಿವಾಸಿಯಾಗಿರುವ ತುಷಾರ್ ಮೃತ ವಿದ್ಯಾರ್ಥಿಯಾಗಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಬಿಕಾಂ ಮುಗಿಸಿ ಉನ್ನತ ವ್ಯಾಸಾಂಗಕ್ಕಾಗಿ ಬೆಂಗಳೂರಿನ ರಾಮಯ್ಯ ಕಾಲೇಜಿಗೆ ಸೇರಿದ್ದರು. ಇಂದು ಮುಂಜಾನೆ ಬೈಕ್ನಲ್ಲಿ ಬೆಳ್ತಂಗಡಿಯ ಬೆಳಾಲ್ ನಿವಾಸಿಯಾಗಿರುವ ಇನ್ನೋರ್ವ ಯುವಕನ ಜೊತೆ ಕಾಲೇಜಿಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ ತುಷಾರ್ ಮೃತ ಪಟ್ಟಿದ್ದರೆ ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ. ತುಷಾರ್ ತಾಯಿ ಉಜಿರೆಯ ಅನುಗ್ರಹ ಶಾಲೆಯಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.