
ಉಪ್ಪಿನಂಗಡಿ ನವೆಂಬರ್ 08: ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬ ನೆರಮನೆಯವನನ್ನು ಕಡಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.

ಕೊಲೆಯಾದವರನ್ನು ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂದು ಗುರುತಿಸಲಾಗಿದೆ. ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಶುಕ್ರವಾರ ಸಂಜೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ವೇಳೆ ತಡೆದು ಕೊಲೆ ಮಾಡಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ
