
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ನವಂಬರ್ 29ರಂದು 2024 -25 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆಯನ್ನು ಕಾಲೇಜಿನಲ್ಲಿ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಶರ್ಮಾ ರವರ ವೈದಿಕತ್ವದಲ್ಲಿ ಹಮ್ಮಿಕೊಳ್ಳಲಾಯಿತು.



ಸಮಾರಂಭದಲ್ಲಿ ಡಾ. ಚಿದಾನಂದ ಕೆ ವಿ, ಅಧ್ಯಕ್ಷರು, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಶ್ರೀಮತಿ ಶೋಭಾ ಚಿದಾನಂದ, ಉಪಾಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಎಒಎಲ್ಇ ಕೌಂನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆ, ಎಡವೈಸರ್ ಶ್ರೀ. ದಾಮೋದರ ಗೌಡ, ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಶ್ರೀ. ಚಂದ್ರಶೇಖರ್ ಪೇರಾಲ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಗಳು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ ವಿ. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಗಳಾದ ಡಾ. ಹರ್ಷಿತಾ ಎಂ., ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
