ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ

ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ

ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ.

ಪ್ರಕಾಶ್ ಅಂಚನ್ ತಮ್ಮ ಸ್ಕೂಟರ್‌ನಲ್ಲಿ ಮರಕಡ ಕಡೆಯಿಂದ ಕಾವೂರು ಕಡೆಗೆ ಬರುತ್ತಿದ್ದರು. ಈ ವೇಳೆ ಸ್ಕೂಟರ್‌ ಸ್ಕಿಡ್‌ ಆಗಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಲಾರಿಯೊಂದು ಪ್ರಕಾಶ್‌ ಅವರ ಮೇಲೆ ಹರಿದಿದೆ. ಲಾರಿಯ ಚಕ್ರ ದೇಹದ ಮೇಲೆ ಹರಿದ ಕಾರಣ ಸವಾರ ಮೃತಪಟ್ಟಿದ್ದಾರೆ. ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ