ಪುತ್ತೂರು : ಬಸ್ – ಬೈಕ್‌ ಅಪಘಾತ; ಸವಾರ ಸಾವು

ಪುತ್ತೂರು : ಬಸ್ – ಬೈಕ್‌ ಅಪಘಾತ; ಸವಾರ ಸಾವು

ಪುತ್ತೂರು:ಕೆ.ಎಸ್‌.ಆರ್‌.ಟಿ.ಸಿ. ಬಸ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಮುರ ಎಂಬಲ್ಲಿ ಡಿ. 19ರ ಗುರುವಾರ ನಡೆದಿದೆ.

ಮೃತ ವ್ಯಕ್ತಿ ಪಡ್ನೂರು ಗ್ರಾಮದ ಅಬ್ದುಲ್‌ ಕುಂಞಂ(65.ವ) ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಬೈಕ್‌ ನಜ್ಜು ಗುಜ್ಜಾಗಿದೆ. ಬೈಕ್‌ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ