ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಸರಕಾರ ಆದೇಶ

ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಸರಕಾರ ಆದೇಶ

ಉಡುಪಿ : ಕರಾವಳಿಯ ಪ್ರತಿ ಕಂಬಳಕ್ಕೂ 5 ಲ. ರೂ. ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕ‌ರ್ ಯುಟಿ ಖಾದರ್ ಕಂಬಳ ಪರ ಮಾತನಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು.

ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ ಮಾಡಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್‌ಕೆ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. 2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಘೋಷಣೆಯಾಗಿದೆ.

ರಾಜ್ಯ