ಮಾಣಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ಮಾಣಿ: ಉಪ್ಪಿನಂಗಡಿಯಲ್ಲಿ ಮಗುವನ್ನೆತ್ತಿಕೊಂಡು ಬಂದ ಮಹಿಳೆಯೋರ್ವರಿಗೆ ತನ್ನ ಸೀಟು ಬಿಟ್ಟು ಕೊಟ್ಟು ನಿಂತಿದ್ದ ವೇಳೆ ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ನಡೆದಿದೆ. ನಿನ್ನಿಕಲ್ಲ್ ನಿವಾಸಿ ಶ್ರೀಮತಿ ರಾಧಾ (66) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜ.31ರಂದು ಕಾರ್ಯನಿಮಿತ್ತ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ…










