ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಣ್ಣಗುಡ್ಡೆಯಿಂದ ಲೇಡಿಹಿಲ್ ಕಡೆಗೆ ಬರುತ್ತಿದ್ದ ಕಾರಿನ ಬಾನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಕಾರಿನಲ್ಲಿದ್ದವರು ಕೆಳಕ್ಕಿಳಿದಿದ್ದರು. ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾರನ್ನು ಆವರಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

‘ಕಾರಿಗೆ ಬೆಂಕಿ ಹೊತ್ತಿಕೊಂಡ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿದ್ದೇವೆ. ಅಷ್ಟರಲ್ಲೇ ಕಾರಿನ ಶೇ 90ರಷ್ಟು ಸುಟ್ಟು ಹೋಗಿತ್ತು. ಕೊಂಚಾಡಿ ದೇರೇಬೈಲ್‌ನ ಲಿಂಗರಾಜು ಅವರಿಗೆ ಸೇರಿದ ಕಾರು ಇದಾಗಿದೆ. ಎಂಟು ತಿಂಗಳ ಹಿಂದಷ್ಟೇ ಅವರು ಕಾರನ್ನು ಖರೀದಿಸಿದ್ದರು. ಅದನ್ನು ಬಾಡಿಗೆ ವಾಹನವಾಗಿ ಬಳಸುತ್ತಿದ್ದರು. ಪಾಲಿಕೆ ಜೊತೆ ಬಾಡಿಗೆ ಒಪ್ಪಂದ ಮಾಡಿಕೊಂಡಿದ್ದರು’ ಎಂದು ಕದ್ರಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ತಿಳಿಸಿದರು.

ರಾಜ್ಯ