ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ

10-05-2025 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು ನಿರಂತರತೆಯ ಮಹತ್ವವನ್ನು ಕಲಿಸುತ್ತದೆ ಎಂದು ಹೇಳಿ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೂರಕವಾದ ಕ್ರೀಡೆ ಮತ್ತು ಸಾಂಸ್ಕೃತಿಕ ವೇದಿಕೆಯನ್ನು ನೀಡುವಲ್ಲಿ ಶ್ರಮಿಸುವ ಕಾಲೇಜಿನ ಸಿಬ್ಬಂದಿಗಳನ್ನು ಅಭಿನಂದಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಮುಖ್ಯ ಅತಿಥಿ ಶ್ರೀ ವಿ.ಜೆ. ವಿಖ್ಯಾತ್‌ರವರು, ಗುತ್ಯಮ್ಮ ದೇವಿಯ ಅನುಗ್ರಹವು ಸಂಸ್ಥೆಯ ಪ್ರತಿಯೊಬ್ಬರ ಮೇಲಿದ್ದು, ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂಸ್ಥೆಯ ಕಾರ್ಯವೈಖರಿ ಮತ್ತು ಸಂಸ್ಥೆಯ ಮುಖ್ಯಸ್ಥರ ದಿಟ್ಟ ನಡೆಯನ್ನು ಶ್ಲಾಘಿಸಿದರು.

ಡಾ. ಜ್ಯೋತಿ ಆರ್ ಪ್ರಸಾದ್‌ರವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಒಗ್ಗೂಡಿಸಿಕೊಂಡು ಜೀವನದಲ್ಲಿ ಮುಂದುವರೆಯಬೇಕೆಂದು ಹೇಳಿದರು.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ಉಜ್ವಲ್ ಯು.ಜೆ. ರವರು, ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು ವಿದ್ಯಾರ್ಥಿಗಳಿಗೆ ಯಶಸ್ಸನ್ನು ತಂದು ಕೊಡುತ್ತವೆ ಎಂದು ಕಿವಿಮಾತು ಹೇಳಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಅವರು ಮಾತನಾಡಿ, ಭಾಗವಹಿಸುವ ಎಲ್ಲಾ ತಂಡಗಳಿಗೆ ಶುಭ ಹಾರೈಸಿ, ಎಲ್ಲರು ಕ್ರೀಡಾ ಸ್ಪೂರ್ತಿಯೊಂದಿಗೆ ಆಟವಾಡಿ ಹೊನಲು ಬೆಳಕಿನ ಆಟವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ಈ ಕ್ರೀಡಾ ಕೂಟದಲ್ಲಿ ಕಾಲೇಜಿನ ೨೪ ತಂಡಗಳು ಭಾಗವಹಿಸಿದ್ದವು. ಹಾಗೂ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವು ಕಾರ್ಯಕ್ರಮದ ಕೇಂದ್ರ ಬಿಂದುವಾಗಿತ್ತು. ಜೊತೆಗೆ ಸಿಡಿಮದ್ದು ಪ್ರದರ್ಶನವು ನೆರೆದ ಪ್ರೇಕ್ಷಕರಿಗೆ ಮನರಂಜನೆ ಒದಗಿಸಿತು.

ನಂತರ ನಡೆದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಖಿಲಾಡೀಸ್ ತಂಡ ಮತ್ತು ದ್ವಿತೀಯ ಸ್ಥಾನವನ್ನು ಅಸ್ಟ್ರೋ ವೈಕಿಂಗ್ಸ್ ತಂಡ ಪಡೆದುಕೊಂಡಿತು.ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ., ಆಡಳಿತಾಧಿಕಾರಿ ಶ್ರೀ ನಾಗೇಶ್ ಕೊಚ್ಚಿ, ಡಾ. ಚಂದ್ರಶೇಖರ್ ಎ., ಡೀನ್ ಅಡ್ಮಿಷನ್ ಡಾ. ಬಾಲಪ್ರದೀಪ್ ಕೆ.ಎನ್., ಡೀನ್ ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್., ಸಿಎಸ್ಇ ವಿಭಾಗದ ಡಾ. ಸವಿತಾ ಸಿ.ಕೆ., ಟ್ರೈನಿಂಗ್ ಮತ್ತು ಪ್ಲೇಸ್‌ಮೆಂಟ್ ಆಫೀಸರ್ ಪ್ರಶಾಂತ್ ಕಕ್ಕಾಜೆ, ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಲೋಕೇಶ್ ಪಿ.ಸಿ., ಕ್ರೀಡಾ ಸಂಯೋಜಕ ಪ್ರೊ. ಅಜಿತ್ ಬಿ.ಟಿ., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಜೇಶ್ ಕುಮಾರ್ ಎಂ.ಎಸ್., ಹಾಗೂ ಶ್ರೀ ಪ್ರಶಾಂತ್ ಕೆ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಸಂಘದ ಎಲ್ಲಾ ಸದಸ್ಯರುಗಳು ಪಂದ್ಯಾಕೂಟದ ಯಶಸ್ಸಿಗೆ ಸಂಪೂರ್ಣ ಸಹಕರಿಸಿದರು.

ಕ್ರೀಡೆ ಶೈಕ್ಷಣಿಕ