ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಬಲಿ – ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಬಲಿ – ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬಂಟ್ವಾಳ (ಮೇ 27): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಡೂರು ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳು ನಡೆಸಿದ ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಎಂಬವರು ಬಲಿಯಾಗಿರುವ ಘಟನೆ ಆತಂಕದ ಪರಿಸ್ಥಿತಿಯನ್ನು ಉಂಟುಮಾಡಿದೆ.

ಸ್ಥಳೀಯವಾಗಿ ಉದ್ವಿಗ್ನತೆಯು ತೀವ್ರಗೊಂಡ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ತಾಲೂಕುಗಳಲ್ಲಿ ನಿಷೇಧಾಜ್ಞೆ (ಸಕ್ಷನ್ 144) ಜಾರಿಗೊಳಿಸಲಾಗಿದೆ.

ಪೊಲೀಸ್ ಇಲಾಖೆ ಜಾಗರೂಕತೆ ವಹಿಸಿ ತನಿಖೆಯನ್ನು ಪ್ರಾರಂಭಿಸಿದ್ದು, ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.ಜಿಲ್ಲೆಯ ಜನತೆ ಶಾಂತಿ ಕಾಪಾಡಿಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಅಪರಾಧ