ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಪೆರಾಬೆ ಹಾಗೂ ವಿಕಾಸ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಪೆರಾಬೆ ಇದರ ಜಂಟಿ ಆಶ್ರಯದಲ್ಲಿ ಎರಡು ತಿಂಗಳ ಹೊಲಿಗೆ ತರಬೇತಿಯನ್ನು ಉದ್ಘಾಟಿಸಲಾಯಿತು.


ಶ್ರೀ ಜ್ಯೋತಿ ರಾಜ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಶುಭ ಹಾರೈಸಿದರು, ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಗಳ ತಿಳಿಸಿ ಮಹಿಳೆಯರು ಇದರ ಪ್ರಯೋಜನ ಪಡೆಯಲು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಸಂಧ್ಯಾ ಅಧ್ಯಕ್ಷರು ಗ್ರಾಮ ಪಂಚಾಯತ್ ಪೆರಾಬೆ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡುತ್ತಾ ಸ್ವ-ಉದ್ಯೋಗದ ನಿಯಮಗಳು, ಸ್ವ-ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಗಳು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಶ್ರೀಮತಿ ಶಾಲಿನಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶ್ರೀಮತಿ ಸಂಧ್ಯಾ ಅಧ್ಯಕ್ಷರು ವಿಕಾಸ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ತಾಲೂಕು ಅಭಿಯಾನ ನಿರ್ವಹಣೆ ಘಟಕದ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ ಶ್ರೀಮತಿ ನಳಿನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು…ಶ್ರೀಮತಿ ಲಿಖಿತ ಸಂಪನ್ಮೂಲ ವ್ಯಕ್ತಿ ಸ್ವಾಗತಿಸಿದರು. ಶ್ರೀಮತಿ ಗೀತಾ ಪಶುಸಖಿ ಧನ್ಯವಾದ ಸಮರ್ಪಣೆ. ಶ್ರೀಮತಿ ಮಾಲತಿ ಮುಖ್ಯ ಪುಸ್ತಕ ಬರಹಗಾರರು ಕಾರ್ಯಕ್ರಮ ನಿರೂಪಣೆ ಮಾಡಿದರು.