ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತಾಲೂಕು ಸಂಚಾರಿ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಕುರಿತು ಉಡುಪಿಯ ಬಿಜೆಪಿ ಮುಖಂಡರು ದೂರು ನೀಡಿದ್ದು, ಎರಡು ಬಾರಿ ನೋಟಿಸ್ ನೀಡಿದರೂ ಸಮರ್ಪಕ ಉತ್ತರ ನೀಡದ ಕಾರಣ ಗುರುವಾರ ಅವರನ್ನು ಉಜಿರೆಯಿಂದ ವಶಕ್ಕೆ ಪಡೆಯಲಾಗಿದೆ ಎಂದು ಬ್ರಹ್ಮಾವರ ಎಸ್ಡಿ ಪಿ ಐ ಹರಿರಾಮ್ ಶಂಕರ್ ತಿಳಿಸಿದ್ದಾರೆ

