ನವದೆಹಲಿ: ಗಂಭೀರ ವಾಯು ಮಾಲಿನ್ಯದಿಂದ ಬಳಲುತ್ತಿರುವ ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಹೊಸ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಈ ತಿಂಗಳ 28ರಿಂದ 30ರವರೆಗೆ ಕ್ಲೌಡ್ ಸೀಡಿಂಗ್ ಮೂಲಕ ಕೃತಕ ಮಳೆ ಸುರಿಸುವ ಕಾರ್ಯಾಚರಣೆ ನಡೆಸಲಾಗುತ್ತದೆ.

ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ದೆಹಲಿಯ ವಾಯು ಗುಣಮಟ್ಟ ಅಪಾಯಕಾರಿ ಹಂತದಲ್ಲಿರುವುದರಿಂದ ನಾಗರಿಕರ ಆರೋಗ್ಯ ರಕ್ಷಣೆಗೆ ತ್ವರಿತ ಕ್ರಮವಾಗಿ ಈ ಯೋಜನೆ ಕೈಗೊಳ್ಳಲಾಗಿದೆ ಎಂದರು. “ದೇಶದ ರಾಜಧಾನಿಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಪ್ರಯೋಗ ಯಶಸ್ವಿಯಾದರೆ, ಮಾಲಿನ್ಯ ನಿಯಂತ್ರಣಕ್ಕೆ ಉತ್ತಮ ಮಾರ್ಗ ಸಿಗಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

