ನವದೆಹಲಿಯಿಂದ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ಗೆ ಚಾಲನೆ

ನವದೆಹಲಿಯಿಂದ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ಗೆ ಚಾಲನೆ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ನವದೆಹಲಿಯಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಹೊಸ ಎಕ್ಸ್‌ಪ್ರೆಸ್‌ ರೈಲು ಸೇವೆಯು ಗೋರಖ್‌ಪುರ ಮತ್ತು ಇಜ್ಜತ್‌ನಗರ ನಡುವೆ ರೈಲು ಸಂಪರ್ಕವನ್ನು ಹೆಚ್ಚಿಸಲಿದೆ.

ಈ ಮೂಲಕ ಸಾರ್ವಜನಿಕರಿಗೆ ಮತ್ತಷ್ಟು ಸುಗಮ ಮತ್ತು ವೇಗದ ಪ್ರಯಾಣದ ಅನುಕೂಲ ಒದಗಿಸಲಾಗುತ್ತಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಸಚಿವರು ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ತಂತ್ರಜ್ಞಾನ ರಾಷ್ಟ್ರೀಯ