ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಾಲಯದ ವ್ಯವಸ್ಥಾಪನಾ ಸಮಿತಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ಸೆಪ್ಟೆಂಬರ್ ತಿಂಗಳ ಕೆಲ ನಿರ್ದಿಷ್ಟ ದಿನಗಳಂದು ಕ್ಷೇತ್ರದಲ್ಲಿ ನೆರವೇರುವ ಪ್ರಮುಖ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ.

ದೇವಾಲಯದ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 4 ಮತ್ತು 7ರಂದು ಕ್ಷೇತ್ರದಲ್ಲಿ ನೆರವೇರುವ ಆಶ್ಲೇಷಬಲಿ ಹಾಗೂ ಸರ್ಪಸಂಸ್ಕಾರ ಸೇವೆಗಳು ಸಂಪೂರ್ಣವಾಗಿ ರದ್ದಾಗಲಿವೆ.

ವಿಶೇಷ ಸೇವೆಗಳು ಲಭ್ಯವಿರುವುದಿಲ್ಲ: ಸೆಪ್ಟೆಂಬರ್ 3, 4, 6 ಮತ್ತು 7ರಂದು ದೇವಸ್ಥಾನದಲ್ಲಿ ಯಾವುದೇ ರೀತಿಯ ವಿಶೇಷ ಸೇವೆಗಳು ಲಭ್ಯವಿರುವುದಿಲ್ಲ. ಈ ದಿನಗಳಲ್ಲಿ ಆಗಮಿಸುವ ಭಕ್ತಾದಿಗಳಿಗೆ ಕೇವಲ ಶ್ರೀ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದಾಗ್ಯೂ, ದೇವಸ್ಥಾನದಲ್ಲಿ ದಿನನಿತ್ಯ ನೆರವೇರುವ ನಿತ್ಯ ಪೂಜೆ ಹಾಗೂ ದೈನಂದಿನ ಸೇವೆಗಳು ನಿಯಮಿತವಾಗಿ ನೆರವೇರಲಿವೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲು ಯೋಜಿಸುತ್ತಿರುವ ಭಕ್ತಾದಿಗಳು ಈ ಮೇಲ್ಕಂಡ ದಿನಾಂಕಗಳು ಮತ್ತು ಸೇವೆಗಳ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮನವಿ ಮಾಡಿದೆ.

