
ಸುಳ್ಯ: ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.೧ರಂದು ವರದಿಯಾಗಿದೆ.ಬಾಲಕನನ್ನು ದಿ ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ


ಬಾಲಕನ ತಾಯಿ ಶಮೀರಾ ಮಗಳ ಚಿಕಿತ್ಸೆಗಾಗಿ ಕ್ಯಾಲಿಕೆಟ್ ತೆರಳಿದ್ದರು, ಈ ಸಂದರ್ಭ ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು ,ಬಾಲಕನ ಮಾವ ಅ.೧ ರಂದು ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ, ಬಾಲಕ ಶಾಲೆಬಿಟ್ಟು ತಿರುಗಾಡುತ್ತಿದ್ದು ,ಮನೆಯ ಆತನಿಗೆ ಶಾಲೆಗೆ ತೆರಳುವಂತೆ ಬುದ್ದಿ ಹೇಳಿದ್ದರು ,ಶಾಲೆಗೆ ತೆರಳಲು ಮನಸ್ಸಿಲ್ಲದೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.