
ಪುತ್ತೂರು: ಪುತ್ತೂರಿನ ಗ್ರಾ.ಪಂ ನ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ ಅಧಿಕೃತ ಸೇರ್ಪಡೆಯಾದರು.
ಆರ್ಯಾಪು ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಹಾಗೂ ಪೂರ್ಣಿಮಾ ರೈ ಕಾಂಗ್ರೆಸ್ ಸೇರಿದ ಗ್ರಾಪಂ ಸದಸ್ಯರು. ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಶಾಸಕರಾದ ಅಶೋಕ್ ರೈ ,ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಯವರು ಪಕ್ಷದ ದ್ವಜ ನೀಡಿ ಇಬ್ನರನ್ನೂ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು ಪಕ್ಷದ ಸಿದ್ದಾಂತ ಹಾಗೂ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಅವರಿಬ್ಬರನ್ನೂ ಪಕ್ಷಕ್ಕೆ ಬರ ಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಅವರ ವಾರ್ಡಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ ಎಂದು ಹೇಳಿದರು.
ಪುತ್ತೂರು ಶಾಸಕರ ಬಡವರ ಪರ ಇರುವ ಕಾಳಜಿ ಮತ್ತು ಅವರ ಅಭಿವೃದ್ದಿ ಯೋಜನೆಗಳು, ಕಾಂಗ್ರೆಸ್ ಸರಕಾರದ ಬಡವರ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕಾಂಗ್ರೆಸ್ ಸೇರುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಸಾಮಾಜಿಕ ಜಾಲತಾಣದ ಬ್ಲಾಕ್ ಘಟಕದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

