ಗಣೇಶ ಚತುರ್ಥಿಯ ಸರ್ಕಾರಿ ರಜೆ ಬದಲಾವಣೆಗೆ ಉಸ್ತುವಾರಿ ಸಚಿವರಿಂದ ಸೂಚನೆ.

ಗಣೇಶ ಚತುರ್ಥಿಯ ಸರ್ಕಾರಿ ರಜೆ ಬದಲಾವಣೆಗೆ ಉಸ್ತುವಾರಿ ಸಚಿವರಿಂದ ಸೂಚನೆ.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಗಣೇಶ ಹಬ್ಬ ಆಚರಿಸಲು ಅನುಕೂಲವಾಗುವಂತೆ ಸರ್ಕಾರಿ ರಜೆಯನ್ನು ಸೆಪ್ಟೆಂಬರ್18ರ ಬದಲು ಸೆಪ್ಟೆಂಬರ್ 19ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದ.ಕ. ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಕರಾವಳಿಯಲ್ಲಿ ಅದರಲ್ಲೂ ದ.ಕ. ಜಿಲ್ಲೆಯಲ್ಲಿ ಈ ಬಾರಿ ಗಣೇಶ ಹಬ್ಬ ಸೆ. 19ರಂದು ಆಚರಣೆಯಾಗುತ್ತಿದೆ. ಆದರೆ ರಾಜ್ಯ ಸೆಪ್ಟೆಂಬರ್18ರಂದು ಗೌರಿ ಹಬ್ಬಕ್ಕೆ ರಜೆಯನ್ನು ಘೋಷಿಸಿದೆ. ಇದರಿಂದಾಗಿ ಮರುದಿನ ನಡೆಯುವ ಗಣೇಶ ಹಬ್ಬ ಆಚರಣೆಯಿಂದ ಸರ್ಕಾರಿ ನೌಕರರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಂಚಿತಗೊಳ್ಳುವಂತಾಗಿತ್ತು.

ಈ ಬಗ್ಗೆ ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದರು.

ರಾಜ್ಯ