
ಸುಳ್ಯ ಚಲಿಸುತ್ತಿದ್ದ ಬಸ್ಸು ಹತ್ತಲು ಹೋದ ವ್ಯಕ್ತಿಯೊಬ್ಬರು ರಸ್ತೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿ ವ್ಯಕ್ತಿ ಸಾವನಪ್ಪಿರುವ ಘಟನೆ ವರದಿಯಾಗಿದೆ, ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ.
ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಕರುಣಾಕರ ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಬಿದ್ದರೆಂದು ಹೇಳಲಾಗಿದೆ, ತಲೆಗೆ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಮತ್ತು ಆಟೋ ಚಾಲಕರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಅವರ ಮನೆಗೆ ಕರೆದುಕೊಂಡು ಹೋಗಲಾಯಿತು , ಮನೆಯಲ್ಲೆ ಮುಂಜಾನೆ ಸುಮಾರು 3 ಗಂಟೆಯ ಗೊತ್ತಿಗೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು ಆ ವೇಳೆಗೆ ಸಮಸ್ಯೆ ಉಲ್ಬಣಿಸಿದ್ದ ಕಾರಣ ಇಲ್ಲಿ ಆಗುವುದಿಲ್ಲ ಕೂಡಲೇ ಮಂಗಳೂರಿಗೆ ಕರೆದೊಯ್ಯುಬೇಕು ಎಂದು ವೈಧ್ಯರ ಸಲಹೆ ಮೇರೆಗೆ ಇದೀಗ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು, ಅಲ್ಲಿ ಅವರು ಸಾವನ್ನಪಿರುವುದಾಗಿ ತಿಳಿದು ಬಂದಿದೆ.

