ಕಳೆಂಜ ಮಸೂದ್ ಕೊಲೆ ಪ್ರಕರಣ ಎರಡು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮಿನು ಮಂಜೂರು.

ಕಳೆಂಜ ಮಸೂದ್ ಕೊಲೆ ಪ್ರಕರಣ ಎರಡು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮಿನು ಮಂಜೂರು.


ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು‌ ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ರವರು ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಆರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

ರಾಜ್ಯ