
ವೆಂಕಟ್ ವಳಲಂಬೆಯವರನ್ನು ಬಿಜೆಪಿಯ ಸುಳ್ಯ ಮಂಡಲ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿರುವ ಚಟುವಟಿಕೆಯ ಬೆನ್ನಲ್ಲೆ ಪಕ್ಷದೊಳಗೆ ಆತಂತರಿಕ ಬಿನ್ನಮತ ಸ್ಪೋಟಗೊಂಡಿದೆ, ರಾಜ್ಯದಲ್ಲಿ ಸುಳ್ಯ ಕ್ಷೇತ್ರ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಿದ್ದು ಇದೀಗ ಇದೇ ಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಸುಳ್ಯ ಬಿ ಜೆ ಪಿ ಕೋರ್ ಕಮಿಟಿ ಸೂಚಿಸಿದ ಹೆಸರನ್ನು ಬಿಟ್ಟು ಮತ್ತೊಬ್ಬರನ್ನು ಆಯ್ಕೆ ಮಾಡಲಾಗಿದೆ , ಈಗ ನೇಮಿಸಿದ ರೀತಿಯನ್ನು ವಿರೋಧಿಸಿರುವ ಸುಳ್ಯ ಮಂಡಲ ಬಿಜೆಪಿಯು ಈ ವ್ಯವಸ್ಥೆಯನ್ನು ಜಿಲ್ಲಾ ಸಮಿತಿಯವರು ಸರಿಪಡಿಸುವವರೆಗೆ ಪಕ್ಷದ ಚಟುವಟಿಕೆಯನ್ನು ಸ್ಥಗಿತಗೊಳಿಸಿ ನಿರ್ಧರಿಸಿ ಪಕ್ಷದ ಕಚೇರಿಗೆ ಬೀಗ ಜಡಿಯಲಾಗಿದೆ..


ಸುಳ್ಯ ಮಂಡಲ ಸಮಿತಿಯು ವಿನಯಕುಮಾರ್ ಮುಳುಗಾಡು ಅವರ ಹೆಸರನ್ನು ಮಂಡಲ ಅಧ್ಯಕ್ಷತೆಗೆ ಸೂಚಿಸಿ ಜಿಲ್ಲಾ ಕಮಿಟಿಗೆ ಶಿಫಾರಸ್ಸು ಕಳುಹಿಸಿತ್ತು. ಈ ಶಿಫಾರಸ್ಸನ್ನು ಹೊರತುಪಡಿಸಿ ಬೇರೆಯವರನ್ನು ನೇಮಕ ಮಾಡುವಾಗ ಮಂಡಲ ಸಮಿತಿಯನ್ನು ಸಂಪರ್ಕಿಸದೆ ತಮ್ಮ ಇಚ್ಛೆಯಂತೆ ನೇಮಕ ಮಾಡಿರುವುದು ಸರಿಯಲ್ಲ. ಈ ರೀತಿ ಹೇರಿಕೆಯ ಕ್ರಮವನ್ನು ನಾವು ವಿರೋಧಿಸಬೇಕು ಎಂದು ಸಭೆಯಲ್ಲಿ ಸೇರಿದ್ದ 2೦೦ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರೆಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ಸಮಿತಿಯವರು ಈಗ ಆಗಿರುವ ಪ್ರಮಾದವನ್ನು ಸರಿಪಡಿಸುವವರೆಗೆ ಪಕ್ಷದ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.ಸಭೆಯ ಬಳಿಕ ಬಿಜೆಪಿ ಕಚೇರಿಗೆ ಬೀಗ ಜಡಿಯಲಾಗಿದ್ದು, ಮುಂದಿನ ಬೆಳವಣಿಗೆಯ ಬಗ್ಗೆ ತಿಳಿಯಬೇಕಾಗಿದೆ.
