ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಆರು ಮಂದಿ ವಶಕ್ಕೆ, ಓರ್ವ ಪರಾರಿ 

ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಆರು ಮಂದಿ ವಶಕ್ಕೆ, ಓರ್ವ ಪರಾರಿ 

ಬಂಟ್ವಾಳ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ಅಕ್ರಮವಾಗಿ ಜುಗಾರಿ ಆಟ ನಡೆಯುತ್ತಿದ್ದ ಸ್ಥಳಕ್ಕೆ ಬುಧವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು ಓರ್ವ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್‌ (56), ಸತೀಶ (43), ಅಶ್ರಫ್‌ (47), ಸುರೇಶ (35), ಗೋಪಾಲ (41), ಯೋಗೀಶ ಪ್ರಭು, (46) ಎಂದು ಹೆಸರಿಸಲಾಗಿದ್ದು, ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಮಾರ್‌ ಎಂಬಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ.

ಆರೋಪಿ ಜಯಚಂದ್ರ ಬೊಳ್ಮಾರ್‌ ಎಂಬಾತನ ಒಡೆತನದ ಪಿಲಿಮೊಗರು ಗ್ರಾಮದ ನಡಾಯಿ ಎಂಬಲ್ಲಿರುವ ಮನೆಯೊಳಗೆ ಇಸ್ಪೀಟ್‌ ಎಲೆಗಳನ್ನು ಬಳಸಿ ಅಕ್ರಮವಾಗಿ  ಜುಗಾರಿ ಆಟ ನಡೆಯುತ್ತಿತ್ತು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸ್‌ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಸ್ಥಳದಲ್ಲಿ ದೊರೆತ 28,120/- ರೂಪಾಯಿ ನಗದು ಸಹಿತ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ರಾಜ್ಯ