ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ  6 ಜಾನುವಾರುಗಳು ಬಲಿ..

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ  6 ಜಾನುವಾರುಗಳು ಬಲಿ..

ಕೊಡಗು ಜು.30 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ  6 ಜಾನುವಾರುಗಳು (ಹಸು, ಕರು )ಬಲಿಯಾಗಿರುವ ಘಟನೆ ಹುದಿಕೇರಿ ಹೋಬಳಿ

ತೆರಾಲು ಗ್ರಾಮದಲ್ಲಿ ನಡೆದಿದೆ.  ಬೊಜ್ಜoಗಡ ನಟರಾಜ್ (ನಂದಾ,) ಅವರಿಗೆ ಸೇರಿದ ಜಾನುವಾರುಗಳು 

ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ  ಬಿದ್ದಿದ್ದು, ಅದರಿಂದ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ.

ರಾಜ್ಯ