ಉಳ್ಳಾಲ : ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

ಉಳ್ಳಾಲ : ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

ಉಳ್ಳಾಲ: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಕೊಲ್ಕತ್ತಾ ಮೂಲದ ವಲಸೆ ಕಾರ್ಮಿಕರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರು ಉಳ್ಳಾಲ ನಿವಾಸಿಳಾದ ರಾಹುಲ್ (27), ಅಕ್ಷಯ್ (27), ಗುರುಮೂರ್ತಿ(25), ಸಿಂಚನ್ (1 ಎಂದು ತಿಳಿದು ಬಂದಿದೆ.

ಮಂಗಳವಾರ ತಡರಾತ್ರಿ ಇನ್ನೋವಾ ಕಾರಿನಲ್ಲಿ ಆಗಮಿಸಿದ ನಾಲ್ವರು ಮುಸುಕುಧಾರಿಗಳ ತಂಡ ಕೊಲ್ಕತ್ತಾ ಮೂಲದ ಡೆಕೋರೇಶನ್ ಕಾರ್ಮಿಕರ ಮೇಲೆ ರಾಡ್, ರೀಪುಗಳಿಂದ ಹಲ್ಲೆ ನಡೆಸಿತ್ತು. ಹಲ್ಲೆಯ ಬಳಿಕ ತಂಡ ಪರಾರಿಯಾಗಿತ್ತು.

ಡೆಕೋರೆಶನ್ ಕೆಲಸ ಮಾಡುವ ಎರಡು ತಂಡಗಳ ನಡುವಿನ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗುತ್ತಿರುವ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಾಳು ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯ