ನವದೆಹಲಿ, ಜೂನ್ 8, 2025 – ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿರುವುದಾಗಿ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ನಿರ್ಧಾರವು ಹಿಂದೂ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರ ನಿರಂತರ ಹೋರಾಟ ಮತ್ತು ಒತ್ತಾಯದ ಫಲವಾಗಿ ನಡೆದಿದೆ.



ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದೇಶದಾದ್ಯಂತ ಆಕ್ರೋಶ ಎಬ್ಬಿಸಿದ್ದರೂ, ಪ್ರಕರಣದಲ್ಲಿ ನ್ಯಾಯ ದೊರಕಿಸುವಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ಬಿಜೆಪಿ ನಾಯಕರು ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರದ ವಿರುದ್ಧ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ, ಇದೀಗ ಸರ್ಕಾರವು ಎನ್ಐಎ ತನಿಖೆಗೆ ಅನುಮತಿ ನೀಡಿರುವುದು ಪ್ರಮುಖ ಬೆಳವಣಿಗೆಯಾಗಿದೆ.
ಈ ಹಿಂದೆ ರಾಜ್ಯ ಪೊಲೀಸ್ ಇಲಾಖೆಯು ಪ್ರಕರಣದಲ್ಲಿ ತ್ವರಿತ ತನಿಖೆ ನಡೆಸಿ 11 ಮಂದಿಯನ್ನು ಬಂಧಿಸಿತ್ತು. ಆದರೆ ಆರೋಪಿಗಳಿಗೆ ನಿಖರ ಸಂಬಂಧ ಮತ್ತು ಹಿಂದಿರುವ ಶಕ್ತಿಗಳ ಕುರಿತಾಗಿ ಮತ್ತಷ್ಟು ಆಳವಾದ ತನಿಖೆ ಬೇಕೆಂದು ಹಲವರು ಆಗ್ರಹಿಸುತ್ತಿದ್ದರು.