ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಹಿನ್ನೆಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಹಿನ್ನೆಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜೂನ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಅವರು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಮಳೆಯ ಪರಿಣಾಮ ಇಂದು ದಿನಾಂಕ 16.06.2025 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ಕೇವಲ ಜಿಲ್ಲೆಯ 5 ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಎಂದು ಘೋಷಿಸಲಾಗಿತ್ತು, ಆದರೆ ಇಂದು ಪರಿಷ್ಕೃತ ಪ್ರಕಟಣೆಯಲ್ಲಿ ಜಿಲ್ಲೆಯ ಎಲ್ಲಾ
ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಆಗುತ್ತಿರುವ ಮಳೆ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿರುವ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಹಾಗೂ ಅಗತ್ಯವಿದ್ದರೆ ಜಿಲ್ಲಾಧಿಕಾರಿ ಕಚೇರಿ ಅಥವಾ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಸಹಾಯಕ್ಕಾಗಿ ಸಂಪರ್ಕ: ತುರ್ತು ಸೇವಾ ಸಹಾಯವಾಣಿ – 1077 ಅಥವಾ
0824-2442590

ರಾಜ್ಯ ರಾಷ್ಟ್ರೀಯ ಹವಾಮಾನ ವರದಿ