ಭಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವುದು ವಾಡಿಕೆಯಾಗಿದೆ. ಆದರೆ ಇಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸುವುದು ಸ್ವಲ್ಪ ತಡವಾದ ಹಿನ್ನಲೆಯಲ್ಲಿ ಮಕ್ಕಳು ಶಾಲೆಗೆ ತೆರಳಿ ಅರ್ಧ ದಾರಿಯಲ್ಲೇ ಮತ್ತೆ ಮನೆಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಡಳಿತದ ವಿರುದ್ಧ ಪೋಷಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ರಜೆ ಇದ್ದರೆ ಅದನ್ನು ಮುಂಚಿತಾಗಿ ಘೋಷಿಸಿದೆ ಇದ್ದರೆ ಇಂತಹ ಗೊಂದಲದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

