ಕೆನರಾ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಗೆ ಡಾ. ಉಜ್ವಲ್ ಯು.ಜೆ. ನೇಮಕ

ಕೆನರಾ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಗೆ ಡಾ. ಉಜ್ವಲ್ ಯು.ಜೆ. ನೇಮಕ

ಬೆಳಗಾವಿಯ ವಿ.ಟಿ.ಯು ಉಪಕುಲಪತಿಗಳ ನಿರ್ದೇಶನದಂತೆ ಕೆನರಾ ಇಂಜಿನಿಯರಿಂಗ್ ಕಾಲೇಜು, ಬೆಂಜನಪದವು, ಬಂಟ್ವಾಳ, ಮಂಗಳೂರು ಇದರ ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಊರುಬೈಲು (ಡಾ. ಉಜ್ವಲ್ ಯು.ಜೆ.) ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಡಾ. ಉಜ್ವಲ್ ಯು.ಜೆ. ಪ್ರಸ್ತುತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಜೊತೆಗೆ ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು. ಅವರು ಶ್ರೀ ವೆಂಕಟೇಶ್ವರ ಇಂಜಿನಿಯರಿಂಗ್ ಕಾಲೇಜು (ಬೆಂಗಳೂರು – ಸ್ವಾಯತ್ತ) ಮತ್ತು ರಾಜರೆಡ್ಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (RRIT, ಬೆಂಗಳೂರು – ಸ್ವಾಯತ್ತ) ಇವುಗಳ ಆಡಳಿತ ಮಂಡಳಿಯ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿದ್ದಾರೆ. ಅಲ್ಲದೆ, ವಿ.ಟಿ.ಯು ಲೈಸೆನ್ಸ್ ಇನ್ಸ್ಪೆಕ್ಷನ್ ಕಮಿಟಿ (LIC) ಚೇರ್‌ಮನ್/ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಉಜ್ವಲ್ ಅವರ ಈ ನಾಮನಿರ್ದೇಶನವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕಮಿಟಿ ಬಿ ಎ.ಒ.ಎಲ್.ಇ.(ರಿ) ಚೇರ್‌ಮನ್ ಡಾ. ರೇಣುಕಾಪ್ರಸಾದ್ ಕೆ.ವಿ, ಸೆಕ್ರೆಟರಿ ಡಾ. ಜ್ಯೋತಿ ಆರ್. ಪ್ರಸಾದ್, ಡೈರೆಕ್ಟರ್ ಡಾ. ಅಭಿಜ್ಞ ಕೆ.ಆರ್., ಎಕ್ಸಿಕ್ಯುಟಿವ್ ಡೈರೆಕ್ಟರ್ ಮೌರ್ಯ ಆರ್. ಕುರುಂಜಿ, ಕೆ.ವಿ.ಜಿ.ಡಿ.ಸಿ.&ಹೆಚ್. ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ. ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಶೈಕ್ಷಣಿಕ