ಪುತ್ತೂರು: ತೋಟಗಾರಿಕಾ ಇಲಾಖೆ ಪುತ್ತೂರು ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ನಡೆಯುವ ಎರಡು ದಿನಗಳ ಜೇನು ಕೃಷಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.


ಈ ತರಬೇತಿ ಕಾರ್ಯಕ್ರಮದಲ್ಲಿ ತಜ್ಞರು ಜೇನು ಸಾಕಾಣಿಕೆಯ ತಾಂತ್ರಿಕ ವಿಧಾನಗಳು, ಉತ್ಪಾದನಾ ಕ್ರಮಗಳು ಹಾಗೂ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡಲಿದ್ದಾರೆ.

