ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಆಲಂಕಾರು (ಅ.21): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಆಯೋಜಿಸಲಾಯಿತು.

ಮಂಗಳೂರಿನ ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಎಲುಬು ಮತ್ತು ಮೂಳೆ ಚಿಕಿತ್ಸೆ ವಿಭಾಗ, ಕಣ್ಣಿನ ಚಿಕಿತ್ಸೆ ವಿಭಾಗ ಹಾಗೂ ಸಾಮಾನ್ಯ ರೋಗ ವಿಭಾಗದ ತಜ್ಞ ವೈದ್ಯರು ಈ ಶಿಬಿರದಲ್ಲಿ ಭಾಗವಹಿಸಿ ಉಚಿತ ವೈದ್ಯಕೀಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆಯ ಕುರಿತು ಮಾರ್ಗದರ್ಶನ ನೀಡಿದರು.

ಆಲಂಕಾರು, ಪೆರಾಬೆ ಮತ್ತು ಕುಂತೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಂಡೋಸಲ್ಫಾನ್‌ ಪೀಡಿತರು ಹಾಗೂ ವಿಶೇಷ ಚೇತನರು ಶಿಬಿರದ ಪ್ರಯೋಜನ ಪಡೆದರು.ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಶಾಮುಕ್ತ ಅಭಿಯಾನದಡಿ “ನಾವು ಮಾದಕ ವ್ಯಸನ ಮುಕ್ತರಾಗಬೇಕು” ಎಂಬ ಪ್ರತಿಜ್ಞೆ ಸ್ವೀಕರಿಸಲಾಯಿತು. “ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತಗೊಳಿಸಲು ಮತ್ತು ನನ್ನ ದೇಶವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಸಾಧ್ಯವಿರುವ ಎಲ್ಲವನ್ನು ಮಾಡುತ್ತೇನೆ” ಎಂಬ ದೃಢನಿಶ್ಚಯವನ್ನು ಎಲ್ಲರೂ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಆಲಂಕಾರು ಮತ್ತು ಕುಂತೂರು ಸಮುದಾಯ ಆರೋಗ್ಯ ಸುರಕ್ಷಾಧಿಕಾರಿಗಳು ಶ್ರೀಮತಿ ಬೆನ್ಸಿ ಹಾಗೂ ಶ್ರೀಮತಿ ರಮ್ಯ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಆಲಂಕಾರು ಗ್ರಾಮ ಪಂಚಾಯತ್‌ನ ಮೋನಪ್ಪ ಬರೆಪುದೇಲು, ಪೆರಾಬೆ ಗ್ರಾಮ ಪಂಚಾಯತ್‌ನ ಮುತ್ತಪ್ಪ ಬಿ. ಹಾಗೂ ಆಲಂಕಾರು, ಪೆರಾಬೆ ಮತ್ತು ಕುಂತೂರು ಗ್ರಾಮಗಳ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಆರೋಗ್ಯ ಮತ್ತು ಸೌಂದರ್ಯ ರಾಜ್ಯ