ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ.

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ.

ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ.

ಸಂಜೆ ವೇಳೆ ಮಿಥುನ್ ರೈ ನಗರದ ಮೂಡುಶೆಡ್ಡೆ ಬಳಿ ತಲುಪಿದಾಗ ಬಿಜೆಪಿ ಪಕ್ಷದ ಪರ ಘೋಷಣೆ ಕೇಳಿ ಬಂದಿದೆ. ಈ ವೇಳೆ ಮಿಥುನ್ ರೈ ಜೊತೆಗಿದ್ದವರೂ ಸಹ ಘೋಷಣೆ ಕೂಗಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು, ಬಳಿಕ ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದು, ಕಲ್ಲು ತೂರಾಟ ನಡೆದಿದೆ

ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಕೆ.ಎಸ್.ಆರ್‌ಪಿ, ಸಿಆರ್‌ಪಿಎಫ್ ತುಕಡಿ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ರಾಜ್ಯ