ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ : ಹರಿದು ಬಂದ ಭಕ್ತ ಸಾಗರ : ನಿರಂತರವಾಗಿ ನಡೆಯುತ್ತಿರುವ ಅನ್ನ ಸಂತರ್ಪಣೆ:

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ : ಹರಿದು ಬಂದ ಭಕ್ತ ಸಾಗರ : ನಿರಂತರವಾಗಿ ನಡೆಯುತ್ತಿರುವ ಅನ್ನ ಸಂತರ್ಪಣೆ:

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ನಡೆಯುತ್ತಿದ್ದು ಮೇ 17 ರಂದು ಸಂಜೆ ತರವಾಡು ದೈವಸ್ಥಾನದಿಂದ ಭಂಡಾರ ತಂದ ಬಳಿಕ ಶ್ರೀ ಕಾರ್ನೋನ್ ದೈವದ ವೆಳ್ಳಾಟಂ ಶ್ರೀ ಕೋರಚ್ಚನ್ ದೈವದ ವೆಳ್ಳಾಟಂ, ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟಂ, ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ತೊಡಂಞಲ್, ಬಳಿಕ ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಿತು ಕರ್ನಾಟಕ ಹಾಗೂ ನೆರೆಯ ವಿವಿಧ ಭಾಗಗಳಿಂದ ಭಕ್ತ ಸಾಗರವೇ ಹರಿದು ಬಂದಿತು, ಕೋಲ್ಚಾರು ಕುಟುಂಭಸ್ಥರಿಂದ ನಿರಂತರ ಅನ್ನಸಂತರ್ಪಣೆ ನಡೆಸಲಾಯಿತು ಇದೇ ಸಂದರ್ಭ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪ್ರಮುಖರು ದೇವರ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅದ್ಯಕ್ಷ ಪುರುಶೋತ್ತಮ ಕೋಲ್ಚಾರು.

ಶ್ರೀ ತಂಬುರಾಟ ಭಗವತಿ ಕ್ಷೇತ್ರ, ಕುತ್ತಿಕೋಲು ಆಡಳಿತ ಮಂಡಳಿ ಅಧ್ಯಕ್ಷ ಕುಂಞಿಕಣ್ಣ ಬೇಡಗ ,ಉತ್ಸವ ಸಮಿತಿ ಅಧ್ಯಕ್ಷ ಭಗೀರಥ ಕೋಲ್ಚಾರು ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಚಂದ್ರ ಕೋಲ್ಚಾರು ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಬಲ್ಯಾಡಿ ಕುಟುಂಬದ ಯಜಮಾನ ಕೂಸಪ್ಪ ಗೌಡ ಕೋಲ್ಚಾರು ,ಸಂಚಾಲಕರಾದ ಸೋಮಶೇಖರ ಕ್ಯೂಂಗಾಜೆ, ಜಯಪ್ರಕಾಶ್ ಕುಂಚಡ್ಕ ಉಪಾಧ್ಯಕ್ಷರುಗಳಾದ, ರೂಪಾನಂದ ಕೋಲ್ಚಾರು , ಶಿವಣ್ಣ ಕೋಲ್ಚಾರು, ಶ್ಯಾಮ ಸುಂದರ ಕೋಲ್ಚಾರು ಸಂಘಟನಾ ಕಾರ್ಯದರ್ಶಿ ರಾಧಾಕೃಷ್ಣ ಕೋಲ್ಚಾರು
ಕೋಶಾಧಿಕಾರಿ ಶಿವಪ್ರಸಾಧ್ ಕೋಲ್ಚಾರು, ಆಡಳಿತ ಸಮಿತಿ ಕಾರ್ಯದರ್ಶಿ ರಾಮಪ್ಪ ಮಾಸ್ತರ್ ಕೋಲ್ಚಾರು, ಆಡಳಿತ ಸಮಿತಿ ಕೋಶಾಧಿಕಾರಿ ಮಾಧವ ಗೌಡ ಕೋಲ್ಚಾರು, ಶ್ರಿ ತಂಬುರಾಟಿ ಭಗವತಿ ಆಲೆಟ್ಟಿ ಪ್ರಾದೇಶಿಕ ಸಮಿತಿ ಅದ್ಯಕ್ಷ ನಾರಾಯಣ ಬಾರ್ಪಣೆ ,ಸ್ಥಾನದ ಮನೆ ಅರ್ಚಕ ದಾಮೋದರ, ಮಹಿಳಾ ಸಮಿತಿ ಅಧ್ಯಕ್ಷೆ ಗೀತಾ ಕೋಲ್ಚಾರು, ಕಾರ್ಯದರ್ಶಿ ನಾಗವೇಣಿ ಕೋಲ್ಚಾರು, ಖಜಾಂಜಿ ಗೋವರ್ಧಿನಿ ಕೋಲ್ಚಾರು, ಹಾಗೂ ಉಪಸಮಿತಿಗಳ ಸದಸ್ಯರುಗಳು,ಕೋಲ್ಚಾರು ಕುಟುಂಬಸ್ಥರು ಆಲೆಟ್ಟಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಾಗವಹಿಸಿದರು.

ಇಂದು ಗಂಟೆ 7.00 ರಿಂದ ಶ್ರೀ ಕಾರ್ನೋನ್ ದೈವ ನಡೆದು ಶ್ರೀ ಕೋರಚ್ಚನ್ ದೈವವಾಗಿ ಶ್ರೀ ಕಂಡನಾರ್ ಕೇಳನ್ ದೈವ ನಡೆಯಲಿದೆ.ಅಪರಾಹ್ನ ಗಂಟೆ 3.00 ರಿಂದ ಶ್ರೀ ವಯನಾಟ್ ಕುಲವನ್ ದೈವದ ಅಂಗಣ
ಪ್ರವೇಶವಾಗಿ ಸೂಟೆ ಸಮರ್ಪಣೆ ನಡೆಯಲಿರುವುದು. ಅಪರಾಹ್ನ ಗಂಟೆ 4.00 ರಿಂದ ಶ್ರೀ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ ವಾಗಿ ಮರ ಪಿಳರ್ಕಲ್ ನಡೆದ ಬಳಿಕ ದೈವಸ್ಥಾನದಲ್ಲಿ ಕೈವೀದು ನಡೆಯಲಿದೆ

ರಾಜ್ಯ