
ಕರ್ನಾಟಕದ ಸರಕಾರವು ಘೋಷಣೆ ಮಾಡಿರುವ ಶಕ್ತಿ ಯೋಜನೆಯ ಅಂಗವಾಗಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಕೆಎಸ್ಆರ್ಟಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ಉಚಿತ ಪ್ರಯಾಣದ
ಯೋಜನೆಗೆ ನಾಳೆಯಿಂದ ರಾಜ್ಯದಾಧ್ಯಂತ ಏಕ ಕಾಲದಲ್ಲಿ ಚಾಲನೆ ದೊರೆಯಲಿದೆ. ಅದರಂತೆ ಸುಳ್ಯ ಬಸ್ ನಿಲ್ದಾಣದಲ್ಲಿಯೂ ಈ ಯೋಜನೆ ಚಾಲನೆಯಾಗಲಿದ್ದು ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಲಿದ್ದಾರೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಸಮಾರಂಭದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ತಹಶೀಲ್ದಾರ್ರವರು ವೇದಿಕೆಯಲ್ಲಿ ಇರಲಿದ್ದಾರೆ. ಸಾರ್ವಜನಿಕರು ಮತ್ತು ಬಸ್ ಪ್ರಯಾಣಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದೆ ಎಂದು ಡಿಪ್ಪೋ ಮೆನೇಜರ್ ವಸಂತಕುಮಾರ್ ತಿಳಿಸಿದ್ದಾರೆ.
