ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವವರೇ ಎಚ್ಚರ…ಬಂಟ್ವಾಳದ ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ.
ಬಂಟ್ವಾಳ: ಕೆಲಸ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಜಾಹಿರಾತನ್ನು ನಂಬಿ ಮಾರು ಹೋಗುವ ಮುನ್ನ ಯುವಕರೇ ಎಚ್ಚರವಾಗಿರಿ. ಏಕೆಂದರೇ ಬಂಟ್ವಾಳದ ವೀರಕಂಭ ಗ್ರಾಮದ ನಿವಾಸಿಯೊಬ್ಬರು ಫೇಸ್ಬುಕ್ನಲ್ಲಿ ಬಂದ ಜಾಹೀರಾತಿನ ಮೂಲಕ ಉದ್ಯೋಗಕ್ಕೆ ಸಂಪರ್ಕಿಸಿ ಬರೋಬ್ಬರಿ 9.79 ಲಕ್ಷ ರೂ. ಕಳೆದುಕೊಂಡಿದ್ದಾರೆ.ವೀರಕಂಭ ಗ್ರಾಮದ ನಡಾಲು ರಾಜೇಶ್ ಆಳ್ವ ಎನ್. ವಂಚನೆಗೊಳಗಾದವರು.…










