
ಶಿವಮೊಗ್ಗ: ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಆದಿಚುಂಚನಗಿರಿ
ಸಮುದಾಯ ಭವನದ ರಜತ ಮಹೋತ್ಸವದ
ಅಂಗವಾಗಿ ಏ.6 ಮತ್ತು 7 ರಂದು ಆದಿ ಚುಂಚನಗಿರಿ ಮಠದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ,ಆದಿಚುಂಚನಗಿರಿ ಸಮುದಾಯ ಭವನದ ರಜತ ಮಹೋತ್ಸವ, ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ, ಬಿಜಿಎಸ್ ದತ್ತಿನಿಧಿ ಹಾಗೂ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಏ.6 ಮತ್ತು ಏ.7 ರಂದು ಎರಡು ದಿನಗಳ ಕಾಲ ನಗರದ ಶರಾವತಿ ನಗರದ ಬಡಾವಣೆಯಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದೆ.
ಏ.6 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರ
ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ
ಸ್ವಾಮಿಗೆ ಹೋಮ ಹವನಾದಿಗಳೊಂದಿಗೆ ಕುಂಭಾಭಿಷೇಕ ,ಮಹಾಮಂಗಳಾರತಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ನಂತರ ಬೆಳಿಗ್ಗೆ 8 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ.ಸಹ ಇದೇ ಸ್ಥಳದಲ್ಲಿ ನಡೆಯಲಿದೆ.ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಪಿಯುಸಿ ವಿದ್ಯಾರ್ಥಿಗಳಿಗೆ
ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ
ನಡೆಯಲಿದ್ದು, ಅಂದು ಸಂಜೆ 6:30 ರಿಂದ ಸಾಹಿತ್ಯ ಹುಣ್ಣಿಮೆ ಹಾಗೂ ಬಿಜಿಎಸ್ ದತ್ತಿನಿಧಿ ಹಾಗೂ ಸಾಹಿತ್ಯ ಹುಣ್ಣಿಮೆ ಮತ್ತು ಇತರೆ ಕಾರ್ಯಕ್ರಮಗಳು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದೆ.ಏ.7 ರಂದು ಬೆಳಿಗ್ಗೆ 8:00ಗೆ ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ ಆಗಲಿದ್ದು ಶ್ರೀ ಆದಿಚುಂಚನಗಿರಿ ಪರಮ ಪೂಜ್ಯರಿಂದಆಂಗ್ಲ ಮಾಧ್ಯಮ
ಶಾಲೆಯಲ್ಲಿ ಹಾಗೂ ಶರಾವತಿ ನಗರದ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಬಿರವನ್ನಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ
ಏರ್ಪಡಿಸಲಾಗಿದ್ದು,ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಪೂಜ್ಯ ಸ್ವಾಮೀಜಿಯವರು , ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು,ಹಾಗೂ ಶ್ರೀ ಮಠದ ಸದ್ಭಕ್ತರು ಈ ಎಲ್ಲ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಎರಡು ದಿನಗಳ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿ ಕೊಡಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

