ರಾಜ್ಯ

ಬಂಟ್ವಾಳ – ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಸ್ವಿಪ್ಟ್ ಕಾರು – ಐವರಿಗೆ ಗಾಯ.

ಬಂಟ್ವಾಳ, ಜುಲೈ 9: ಓಮ್ನಿ ಕಾರು ಹಾಗೂ ಸ್ವಿಪ್ಚ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ಬೆಳಗ್ಗೆ ನಡೆದಿದೆ.

ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಓಮ್ನಿ ಕಾರು ಚಾಲಕ ರಾಯ್ಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸೇರಿದಂತೆ ಮೂವರು ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

Leave a Response

error: Content is protected !!