

ಬೆಳ್ತಂಗಡಿ ಮೇ 21: ಸೂಪರ್ ಮಾರ್ಕೆಟ್ ಒಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ಎಂಬಲ್ಲಿ ನಡೆದಿದೆ.
ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ನಲ್ಲಿ ಭಾನುವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪತ್ರಿಕಾ ವಿತರಣೆ ಮಾಡುವವರು ಘಟನೆ ಗಮನಕ್ಕೆ ಬಂದು ತಕ್ಷಣ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಸ್ಥಳೀಯರು ಹಾಗೂ ಅಗ್ನಿಶಾಮಕದ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಬೆಂಕಿ ಸಂಪೂರ್ಣ ತಗುಲಿದ್ದರಿಂದ ಮಾಲಕರು ಸಂಪೂರ್ಣ ನಷ್ಟ ಅನುಭವಿಸಿದ್ದಾರೆ
add a comment