ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಿದ್ದತಾ ಸಭೆ.

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಸಿದ್ದತಾ ಸಭೆ.

ಬಿಜೆಪಿ ಸುಳ್ಯ ಮಂಡಲದ ಕಾರ್ಯನಿರ್ವಹಣಾ ತಂಡದ ಹಾಗೂ ಸಿದ್ಧತಾ ಸಭೆ ಇಂದು ಫೆಬ್ರವರಿ 24ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ಜರುಗಿತು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ ಕಂಜಿಪಿಲಿ ಸಭಾಧ್ಯಕ್ಷತೆ ವಹಿಸಿಕೊಂಡಿದ್ದರು. ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ, ಸುಳ್ಯ ಕ್ಷೇತ್ರದ ಚುನಾವಣಾ ಉಸ್ತುವಾರಿ ಬೆಳ್ತಂಗಡಿಯ ಕುಶಾಲಪ್ಪಗೌಡ ಪೂವಾಜೆ ಉಪಸ್ಥಿತರಿದ್ದರು. ಪಾರ್ಟಿಯ ಸಂಘಟನಾತ್ಮಕ ಕೆಲಸ ಕಾರ್ಯಗಳು ಮನೆಮನೆ ಅಭಿಯಾನ ,ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯ ಯೋಜನೆಯ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿಯ ಅನ್ಯಾನ್ಯ ಜವಾಬ್ದಾರಿಯ ಪ್ರಮುಖರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ರಾಜ್ಯ