ಗ್ಯಾರಂಟಿ ಯೊಜನೆಗಳು ಜಾರಿ… ಕಂಡೀಷನ್​ಗಳೇನು..? ಇಲ್ಲಿದೆ ವಿವರ.

ಗ್ಯಾರಂಟಿ ಯೊಜನೆಗಳು ಜಾರಿ… ಕಂಡೀಷನ್​ಗಳೇನು..? ಇಲ್ಲಿದೆ ವಿವರ.


ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು.

ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆ ಜಾರಿ ಬಗ್ಗೆ ವಿವರಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಗೃಹಜ್ಯೋತಿ ಜಾರಿ

ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು, 12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​ ಎಂದು ತಿಳಿಸಿದರು

ಗೃಹಲಕ್ಷ್ಮೀ ಯೋಜನೆ

ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್​ಲೈನ್​ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್​​ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್​ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು.

ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ

ರಾಜ್ಯ