ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ
ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕ
ಮಾರ್ಗಸೂಚಿ ಪ್ರಕಟಿಸಿದೆ.
ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,
ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ
12:30ರವರೆಗೆ ಸಂಭ್ರಮಾಚರಣೆಗೆ ಅನುಮತಿ
ನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ
ಉಂಟುಮಾಡುವ ಉಪಕರಣಗಳನ್ನು ರಾತ್ರಿ 10 ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ ಒಳಪಟ್ಟು
ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.
ಅದಲ್ಲದೆ ಸಭಾಂಗಣ, ತೆರೆದ ಸ್ಥಳ/ಹೊರಾಂಗಣ
ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ,
ಸರ್ವೀಸ್ ಅಪಾರ್ಟೆಂಟ್, ಕಡಲತೀರ, ಹೋಂಸ್ಟೇ,
ಮಾಲ್ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಟಿ ಡ್ಯಾನ್ಸ್ ಗಳನ್ನು ನಡೆಸುಂತಿಲ್ಲ. ವಿಶೇಷ ಪಾರ್ಟಿ ಇತ್ಯಾದಿ
ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ
ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್
ಇಲಾಖೆಯ ಅನುಮತಿ ಪಡೆಯಬೇಕು. ಆದರೆ ಧಾರ್ಮಿಕಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು/ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು. ದಿನನಿತ್ಯ ನಡೆಯುವ ಕ್ಲಬ್/ಪಬ್/ರೆಸ್ಟೋರೆಂಟ್ಗಳ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್ಟಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.

3 ಗಸ್ತು ಪಡೆ ಅಧಿಕೃತ/ನೋಂದಾಯಿತ ಕೇಂದ್ರಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು, ಸಮಾಜಘಾತುಕ ಶಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ, ನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ, ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆ, ಪಾಲಿಕೆಯ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳ ಗಸ್ತು ಪಡೆಯನ್ನು ರಚಿಸಲಾಗಿದೆ.
ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ
ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ
ಎಲ್ಲಾ ಸರ್ವಿಸ್ ಅಪಾರ್ಟೆಂಟ್, ಹೊಟೇಲ್, ಪಬ್,
ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಹೊಸ ವರ್ಷ
ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ
ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮತ್ತು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Leave a Response

error: Content is protected !!