ರಾಜ್ಯ

ಕುಸಿದ ರಸ್ತೆ: ಪಾಣತ್ತೂರು ಸಂಪರ್ಕಿಸುವ ರಸ್ತೆ ಬಂದ್.

: ಕರ್ನಾಟಕ ಮತ್ತು ಕೇರಳ ಸಂಪರ್ಕ‌ ಕಲ್ಪಿಸುವ ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100 ಮೀಟರ್ ಮುಂದೆ ಈ ಘಟನೆ ಸಂಭವಿಸಿದ್ದು ಪಾಣತ್ತೂರು ರಸ್ತೆ ಸಂಚಾರ ಬಂದ್ ಆಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿತಗೊಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ಹಿಂದೆಯೂ ಗುಡ್ಡ ಕುಸಿತಗೊಂಡಿದ್ದು, ಸಂಚಾರ ಕಡಿತಗೊಂಡಿತ್ತು.

ರಸ್ತೆಗೆ ಪರ್ಯಾಯ ಮತ್ತು ತಾತ್ಕಾಲಿಕವಾಗಿ ರಂಗತ್ತಮಲೆ ರಸ್ತೆಯನ್ನು ಬಳಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ

Leave a Response

error: Content is protected !!